Friday, June 27, 2025
Homeಕರಾವಳಿಮಂಗಳೂರುಮಂಗಳೂರು; ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಲ್ಲ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಮಂಗಳೂರು; ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಲ್ಲ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟನೆ

spot_img
- Advertisement -
- Advertisement -

ಮಂಗಳೂರು;  ಗುಂಡಿನ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಲ್ಲ ಎಂದು  ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಗುಂಡೇಟಿನಿಂದ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ದೂರವಾಣಿ ಕರೆ ಮಾಡಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಗ್ಯ ವಿಚಾರಿಸಿದರು ಎಂದು ಹೇಳಲಾಗಿತ್ತು. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಯೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಯೇ ಇಲ್ಲ. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡೋಕೆ ಹೇಳಿದ್ದೇನೆ. ಆರೋಪಿಗಳು ವಿರುದ್ಧ ಮುಲಾಜಿಲ್ಲದೆ ಕ್ರಮ ಆಗಲಿ ಎಂದು ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!