- Advertisement -
- Advertisement -
ನವದೆಹಲಿ: ಸದ್ಯ ರಾಜಕೀಯ ವಲಯದಲ್ಲಿ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಪ್ರತಿಪಕ್ಷಗಳ ಹಲವು ನಾಯಕರು ಸಚಿವರ ಹೇಳಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನೂ ಕೂಡಾ ಅಶ್ವಥ್ ಹೇಳಿಕೆಯನ್ನ ಒಪ್ಪುವುದಿಲ್ಲ ಎಂದಿದ್ದಾರೆ. ಹಾಗೇ ನಮ್ಮ ಪಕ್ಷ ಕೂಡಾ ಇಂತಹ ಹೇಳಿಕೆಯನ್ನು ಒಪ್ಪುವುದಿಲ್ಲ. ಅಶ್ವಥ್ ಯಾಕೆ ಅಂತಹ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಆದ್ರೆ ಆ ಹೇಳಿಕೆ ಸರಿಯಲ್ಲ ಎಂದು ಸಿ.ಟಿ.ರವಿ ಹೇಳಿದ್ದಾರೆ.
- Advertisement -