- Advertisement -
- Advertisement -
ಹುಬ್ಬಳ್ಳಿ: ಜೈಲಿನಲ್ಲಿದ್ದಾಗ ನಮ್ಮ ತಂದೆ ಡೈರಿ ಬರೆದಿದ್ದಾರೆ. ಪ್ರತಿಯೊಂದು ಘಟನೆಯನ್ನೂ ಬರೆದಿದ್ದಾರೆ. ಸಂದರ್ಭ ಬಂದಾಗ ಅದು ಹೊರಬರುತ್ತೆ ಎಂದು ನಿನ್ನೆ ಯಡಿಯೂರಪ್ಪ ಮಗಳು ಅರುಣಾದೇವಿ ಹೊಸ ಬಾಂಬ್ ಸಿಡಿಸಿದ್ರು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಸವರಾಜು ಬೊಮ್ಮಾಯಿ ನನಗೆ ಅದರ ಬಗ್ಗೆ ಏನೂ ಗೊತ್ತಿಲ್ಲ ಎಂದರು.
ಸದ್ಯ ಯಡಿಯೂರಪ್ಪ ಡೈರಿ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಆ ಡೈರಿಯಲ್ಲಿ ಏನಿದೆ. ಬಿಎಸ್ವೈ ತಮ್ಮ ಡೈರಿಯಲ್ಲಿ ತಮ್ಮ ಪಕ್ಷದ ನಾಯಕರ ಬಗ್ಗೆಯೇ ಬರೆದಿದ್ದಾರಾ ಎಂಬ ಕುತೂಹಲವೂ ಹೆಚ್ಚಿದೆ. ಅಲ್ಲದೇ ನಮ್ಮ ತಂದೆ ಜೈಲಿಗೆ ಹೋಗಿದ್ದು ಕರಾಳ ದಿನಗಳು. ಅವರ ಖುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು ಮಾಡಿದ್ದರು. ಆ ಸಂದರ್ಭದಲ್ಲಿ ರಾಜಕೀಯ ಅಸಹ್ಯ ಅನ್ನಿಸಿತ್ತು ಎಂದು ನಿನ್ನೆ ಅರುಣಾದೇವಿ ಭಾವುಕರಾಗಿ ಹೇಳಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
- Advertisement -