- Advertisement -
- Advertisement -
ದಾವಣಗೆರೆ :ಸಿಎಂ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದೇಶ್ವರ್ ‘ ಬೊಮ್ಮಾಯಿ ಶಿಗ್ಗಾಂವಿಯಿಂದ ಸ್ಪರ್ಧಿಸುವುದಾಗಿ ಹೇಳಬಹುದು. ಆದರೆ ಅಂತಿಮವಾಗಿ ನಿರ್ಧಾರ ಮಾಡುವುದು ಬಿಜೆಪಿ ಹೈಕಮಾಂಡ್. ಬಸವರಾಜ ಬೊಮ್ಮಾಯಿಗೆ ಟಿಕೆಟ್ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ , ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ. ಚುನಾವಣೆ ಘೋಷಣೆಯಾದ ಬಳಿಕ ಟಿಕೆಟ್ ಯಾರಿಗೆ ಸಿಗುತ್ತದೆ ಎನ್ನುವುದು ಖಚಿತವಾಗಲಿದೆ, ಅಲ್ಲಿವರೆಗೆ ಕಾದು ನೋಡಬೇಕು ಎನ್ನುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
- Advertisement -