- Advertisement -
- Advertisement -
ಭಾರೀ ಚರ್ಚೆಗೀಡಾಗಿದ್ದ, ಸಾಕಷ್ಟು ವಿವಾದ ಹುಟ್ಟುಹಾಕಿದ್ದ ಉರಿಗೌಡ-ನಂಜೇಗೌಡ ಸಿನಿಮಾ ನಿರ್ಮಾಣದಿಂದ ಸಚಿವ ಮುನಿರತ್ನ ಹಿಂದೆ ಸರಿದಿದ್ದಾರೆ. ನಾನು ಆ ಸಿನಿಮಾ ಮಾಡಲ್ಲ ಎಂದಿದ್ದಾರೆ..
ಇಂದು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾದ ನಂತರ ಮುನಿರತ್ನ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನಗೆ ಯಾರ ಮನಸ್ಸನ್ನೂ ನೋಯಿಸೋ ಉದ್ದೇಶವಿಲ್ಲ. ಸಿನಿಮಾ ಮಾಡುವ ನಿರ್ಧಾರವನ್ನ ಇಲ್ಲಿಗೇ ಕೈಬಿಟ್ಟಿದ್ದೇನೆ ಎಂದಿದ್ದಾರೆ.
- Advertisement -