Wednesday, May 15, 2024
Homeಕರಾವಳಿಜೆರೋಸಾ ಶಾಲೆ ಪ್ರಕರಣ ತನಿಖೆಗೆ ಐಎಎಸ್‌ ಅಧಿಕಾರಿ ನೇಮಕ; ಸಚಿವ ದಿನೇಶ್ ಗುಂಡೂರಾವ್

ಜೆರೋಸಾ ಶಾಲೆ ಪ್ರಕರಣ ತನಿಖೆಗೆ ಐಎಎಸ್‌ ಅಧಿಕಾರಿ ನೇಮಕ; ಸಚಿವ ದಿನೇಶ್ ಗುಂಡೂರಾವ್

spot_img
- Advertisement -
- Advertisement -

ಮಂಗಳೂರು: ನಗರದ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಧರ್ಮ ನಿಂದನೆ ಮಾಡಿದ್ದಾರೆ ಎನ್ನಲಾದ ಪ್ರಕರಣ ಹಾಗೂ ಅದರ ನಂತರದ ಬೆಳವಣಿಗೆಗಳ ಕುರಿತು ತನಿಖೆ ನಡೆಸಲು ಐಎಎಸ್‌ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಶಿಕ್ಷಣ ಇಲಾಖೆ ಕಲಬುರಗಿಯ ಹೆಚ್ಚುವರಿ ಆಯುಕ್ತರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಸರ್ಕಾರ ಶುಕ್ರವಾರ ಅದೇಶ ಹೊರಡಿಸಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದರು.

‘ಶಿಕ್ಷಕಿ ಪಾಠ ಮಾಡುವಾಗ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಶಾಸಕರು, ಮಕ್ಕಳನ್ನು ಬೀದಿಯಲ್ಲಿ ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಇದು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು. ಅವರ ನಡವಳಿಕೆಯಿಂದ ಬೇಸರವಾಗಿದೆ. ಘಟನೆ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಶಾಸಕರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿಯವರು ಹೇಳಿದಾಕ್ಷಣ ಪ್ರಕರಣ ಹಿಂಪಡೆಯಲಾಗದು. ತನಿಖೆ ನಡೆಯುತ್ತಿದ್ದು, ತಪ್ಪು ಎಸಗಿದ್ದು ದೃಢಪಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

- Advertisement -
spot_img

Latest News

error: Content is protected !!