- Advertisement -
- Advertisement -
ತುಮಕೂರು: ಜೆಡಿಎಸ್ ಪಕ್ಷ ಮುಂಬರುವ ಚುನಾವಣೆಯಲ್ಲಿ 123 ಸ್ಥಾನಗಳಲ್ಲಿ ಗೆದ್ದರೆ ದಲಿತ ಸಿಎಂ ಮಾಡಲು ನಾವು ಸಿದ್ಧ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪಂಚರತ್ನ ರಥಯಾತ್ರೆ ಸಂದರ್ಭ ಮಾತನಾಡಿದ ಅವರು, ಸಿದ್ದರಾಮಯ್ಯ ದಲಿತರಿಗಾಗಿ ಏನು ಮಾಡಿದ್ದಾರೆ. ಅವರು ಅಸ್ಪಶ್ಯರ ಬಗ್ಗೆ ಎಷ್ಟು ಕೀಳಾಗಿ ಮಾತಾಡಿದ್ದಾರೆ. ಮುಖ್ಯಮಂತ್ರಿ ಇದ್ದಾಗ ದಲಿತ ಕುಟುಂಬ ಮಹಿಳೆಯನ್ನ ಚಿಕಿತ್ಸೆ ಕೊಡಿಸಿ ನಮ್ಮ ಮನೆಯಲ್ಲೇ ಆರೈಕೆ ಮಾಡಿದ್ದೆವು. ಯಾವ್ ಮುಖ್ಯಮಂತ್ರಿ ಮಾಡಿದ್ದಾರೆ ಹೇಳಲಿ ಎಂದು ಸಿದ್ದು ವಿರುದ್ಧ ಗುಡುಗಿದರು.
- Advertisement -