- Advertisement -
- Advertisement -
ಉಡುಪಿ: ಗುತ್ತಿಗೆದಾರ ಸಂತೋಷ್ ಅವರ ಮೃತದೇಹವಿರುವ ಲಾಡ್ಜ್ ಗೆ ಪಶ್ಚಿಮ ವಲಯ ಐಜಿಪಿ ದೇವ ಜ್ಯೋತಿ ರೇ ಭೇಟಿ ನೀಡಿದ್ದಾರೆ.
ಈ ವೇಳೆ ಐಜಿಪಿ ಗೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಸಾಥ್ ನೀಡಿದ್ರು. ಶಾಂಭವಿ ಲಾಡ್ಜ್ ಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು ಸಂತೋಷ್ ಕುಟುಂಬದವರ ಬರುವಿಕೆಗೆ ಕಾಯುತ್ತಿದ್ದೇವೆ. ಕುಟುಂಬದವರು ಬಂದ ನಂತರ ತನಿಖೆ ಆರಂಭವಾಗಲಿದೆ. ಈ ಪ್ರಕರಣ ಬಹಳ ಸೂಕ್ಷ್ಮವಾಗಿದೆ. ಕುಟುಂಬಸ್ಥರು ಬಂದ ನಂತರ ನಮ್ಮ ವಿಧಿ ವಿಧಾನಗಳನ್ನು ಆರಂಭ ಮಾಡುತ್ತೇವೆ ಎಂದಿದ್ದಾರೆ.
ಅಲ್ಲದೇ ನಾಳೆ ಮಾಧ್ಯಮಗಳಿಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇನೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಕುಟುಂಬಸ್ಥರು ಬಂದು ದೂರು ನೀಡಿದ ನಂತರ ತೀರ್ಮಾನಿಸಲಾಗುವುದು ಎಂದ್ರು.
- Advertisement -