Tuesday, May 14, 2024
Homeಅಪರಾಧಅಕ್ರಮ ಗೋ ಸಾಗಾಟಕ್ಕೆ ಯತ್ನ, ಇಬ್ಬರು ಆರೋಪಿಗಳ ಬಂಧನ: ಗೋವುಗಳ ರಕ್ಷಣೆ

ಅಕ್ರಮ ಗೋ ಸಾಗಾಟಕ್ಕೆ ಯತ್ನ, ಇಬ್ಬರು ಆರೋಪಿಗಳ ಬಂಧನ: ಗೋವುಗಳ ರಕ್ಷಣೆ

spot_img
- Advertisement -
- Advertisement -

ಚಿಕ್ಕಮಗಳೂರು: ಅಕ್ರಮವಾಗಿ ಗೋ ಸಾಗಾಟಕ್ಕೆ  ಯತ್ನಿಸಿದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರಿನ ಬಣಕಲ್ ಪೊಲೀಸರು ಬಂಧಿಸಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ.

ಬಣಕಲ್ ಹೋಬಳಿಯ ಕೋಳೂರು ಗ್ರಾಮದ ರಸ್ತೆ ಬದಿ ಮಲಗಿದ್ದ ಜಾನುವಾರುಗಳನ್ನು ವಾಹನಕ್ಕೆ ತುಂಬಿಸುತ್ತಿರುವ ಬಗ್ಗೆ  ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕೆ ಆಗಮಿಸಿದ ಬಣಕಲ್ ಸಬ್ ಇನ್ಸ್ಪೆಕ್ಟರ್ ಗಾಯತ್ರಿ ನೇತೃತ್ವದ ಪೊಲೀಸರು , ಇಬ್ಬರು ಆರೋಪಿಗಳನ್ನು ವಾಹನ ಸಮೇತ ಬಂಧಿಸಿ ಹಾಗೂ 7 ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೇಲೂರು ತಾಲ್ಲೂಕಿನ ತೊಳಲು ಗ್ರಾಮದ ಅಹಮದ್ ಹನೀಫ್, ಮತ್ತೊಬ್ಬ ಆರೋಪಿ ಬೇಲೂರಿನ ಹೊಸನಗರ ದೇವರಾಜ್ ಬಂಧಿತರು. ಆರೋಪಿಗಳು ಗೋವುಗಳನ್ನು ಕದ್ದು ಗೋಮಾಂಸ ಮಾರಾಟ ಮಾಡುವ ಉದ್ದೇಶ ಹೊಂದಿದ್ದರು ಎಂಬುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.ಈ ಬಗ್ಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!