- Advertisement -
- Advertisement -
ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಕುರುಡ್ಯ ಎಂಬಲ್ಲಿಂದ ಕಸಾಯಿಖಾನೆಗಳಿಗೆ ಅಕ್ರಮವಾಗಿ ಎರಡು ದನ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರಿಂದ ಮಂಗಳವಾರ ಮಧ್ಯರಾತ್ರಿಯಲ್ಲಿ ಮಿಂಚಿನ ದಾಳಿ ನಡೆಸಿದ್ದಾರೆ.
ಸ್ಥಳೀಯ ಪೋಲೀಸರ ಸಹಕಾರದಿಂದ ಒಬ್ಬ ಆರೋಪಿಯ ಬಂಧನವಾಗಿದೆ ಹಾಗು ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ಮತ್ತು ಮಾರುತಿ 800 ವಾಹನ ವಶ ಮಾಡಲಾಗಿದೆ ಇನ್ನೂ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಮಂಗಳವಾರ ರಾತ್ರಿ ಕಾರ್ಯಕರ್ತರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ. ಕೂಡಲೆ ಅವರನ್ನು ಬೆಳ್ತಂಗಡಿ ಪೋಲೀಸರಿಗೆ ಒಪ್ಪಿಸಿದ್ದಾರೆ.
- Advertisement -