Friday, March 29, 2024
Homeಅಪರಾಧಉಡುಪಿ: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ; ಇಬ್ಬರು ಆರೋಪಿಗಳ ಬಂಧನ

spot_img
- Advertisement -
- Advertisement -

ಉಡುಪಿ: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಸೆನ್‌‌‌‌ ಪೊಲೀಸರು ಬಂಧಿಸಿದ ಘಟನೆ ಉದ್ಯಾವರ ಗ್ರಾಮದ ಗುಡ್ಡೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.

ಆರೋಪಿಗಳನ್ನು ಸೋಮೇಶ್ವರದ ನಿವಾಸಿ ಕಾರ್ತಿಕ್‌ ದೇವಾಡಿಗ (24) ಮತ್ತು ತೇಜಸ್‌ ಪೂಜಾರಿ (18) ಎಂದು ಗುರುತಿಸಲಾಗಿದೆ.

ಜುಲೈ 31 ರ ರಾತ್ರಿ 7.45 ರ ಸುಮಾರಿಗೆ ಉದ್ಯಾವರದ ಗುಡ್ಡೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯ ಬಬ್ಬುಸ್ವಾಮಿ ದೈವಸ್ಥಾನದ ಎದುರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದು, ಈ ಬಗ್ಗೆ ಖಚಿತ ಮಾಹಿತಿ ಪಡೆದ ಸೆನ್‌‌‌ ಅಪರಾಧ ಪೊಲೀಸ್‌ ಠಾಣಾ ನಿರೀಕ್ಷಕ ಮಂಜುನಾಥ್‌‌‌ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 1.226 ಕಿಲೋ ಗಾಂಜಾ, ಎರಡು ಮೊಬೈಲ್ ಫೋನ್ ಹಾಗೂ ಆಟೋ ರಿಕ್ಷಾ ಸೇರಿದಂತೆ ಒಟ್ಟು 1.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಎನ್‌.ವಿಷ್ಣುವರ್ಧನ್‌ ಅವರ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಕುಮಾರ ಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಸೆನ್‌ ಅಪರಾಧ ದಳದ ನಿರೀಕ್ಷಕರಾದ ಮಂಜುನಾಥ್‌ ಹಾಗೂ ಅವರ ತಂಡದ ಪಿ.ಎಸ್‌.ಐ.ಲಕ್ಷಣ್‌, ಎ.ಎಸ್‌.ಐ. ಕೇಶವ್‌ ಗೌಡ ಮತ್ತು ಸಿಬ್ಬಂದಿಗಳಾದ ಕೃಷ್ಣಪ್ರಸಾದ್‌, ಪ್ರವೀಣ್‌, ರಾಘವೇಂದ್ರ ಉಪ್ಪೂರು, ಪ್ರಸನ್ನ ಸಾಲ್ಯಾನ್‌ ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!