- Advertisement -
![]()
- Advertisement -
ಮಂಗಳೂರು: ಫೈಸಲ್ ನಗರ ಬಳಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದೆಯೆನ್ನಲಾದ 11 ದೋಣಿ ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಫೈಸಲ್ ನಗರ ಬಳಿ ನದಿಯಲ್ಲಿ ರಾತ್ರಿ ಹೊತ್ತು ಅಕ್ರಮವಾಗಿ ದೋಣಿಗಳಲ್ಲಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಈ ದಾಳಿ ನಡೆಸಲಾಗಿದೆ.
ನಿನ್ನೆ ಸಂಜೆ ವೇಳೆ ದಾಳಿ ನಡೆಸಿದ್ದ ಪೊಲೀಸರು ಅಕ್ರಮವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ 11 ದೋಣಿಗಳನ್ನು ವಶಪಡಿಸಿಕೊಂಡಿದ್ದು, ಗಣಿ ಇಲಾಖೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
- Advertisement -


