- Advertisement -
- Advertisement -
ಮಂಗಳೂರು : ಅಡ್ಯಾರ್ ನ ಕಣ್ಣೂರು ಪರಿಸರದಲ್ಲಿ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಟಿಪ್ಪರ್ ಚಾಲಕನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ನಿರೀಕ್ಷಕ ಎಸ್.ಎಚ್.ಭಜಂತ್ರಿ ಅವರು ಬೆಳಗ್ಗೆ 7 ಗಂಟೆ ವೇಳೆಗೆ ಗಸ್ತು ನಿರತರಾಗಿದ್ದಾಗ ಕಣ್ಣೂರು ಕಡೆಯಿಂದ ಪಡೀಲ್ ಕಡೆಗೆ ಮರಳನ್ನು ಅಕ್ರಮವಾಗಿ ಟಿಪ್ಪರ್ ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ.
ಅದರಂತೆ ಪಡೀಲ್ ಓವರ್ ಬ್ರಿಡ್ಜ್ ಬಳಿ ಮಿನಿ ಟಿಪ್ಪರ್ ಲಾರಿಯನ್ನು ತಡೆದು ನಿಲ್ಲಿಸಿದಾಗ ಚಾಲಕ/ಮಾಲೀಕ ಅಫಾವುಲ್ಲಾ ಯಾನೆ ಅಪ್ಪು ಎಂಬಾತ ಯಾವುದೇ ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿರುವುದು ಬಯಲಾಗಿದೆ.
ಟಿಪ್ಪರ್ ಲಾರಿ ಹಾಗೂ ಮರಳು ಸಹಿತ ಅಂದಾಜು 4.07 ಲ.ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
- Advertisement -