Sunday, May 5, 2024
Homeಕರಾವಳಿಮಂಗಳೂರು : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾತನ ಬಂಧನ

ಮಂಗಳೂರು : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾತನ ಬಂಧನ

spot_img
- Advertisement -
- Advertisement -

ಮಂಗಳೂರು : ಅಡ್ಯಾರ್ ನ ಕಣ್ಣೂರು ಪರಿಸರದಲ್ಲಿ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಟಿಪ್ಪರ್ ಚಾಲಕನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ನಿರೀಕ್ಷಕ ಎಸ್.ಎಚ್.ಭಜಂತ್ರಿ ಅವರು ಬೆಳಗ್ಗೆ 7 ಗಂಟೆ ವೇಳೆಗೆ ಗಸ್ತು ನಿರತರಾಗಿದ್ದಾಗ ಕಣ್ಣೂರು ಕಡೆಯಿಂದ ಪಡೀಲ್ ಕಡೆಗೆ ಮರಳನ್ನು ಅಕ್ರಮವಾಗಿ ಟಿಪ್ಪರ್ ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ.

ಅದರಂತೆ ಪಡೀಲ್ ಓವರ್ ಬ್ರಿಡ್ಜ್ ಬಳಿ ಮಿನಿ ಟಿಪ್ಪರ್ ಲಾರಿಯನ್ನು ತಡೆದು ನಿಲ್ಲಿಸಿದಾಗ ಚಾಲಕ/ಮಾಲೀಕ ಅಫಾವುಲ್ಲಾ ಯಾನೆ ಅಪ್ಪು ಎಂಬಾತ ಯಾವುದೇ ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿರುವುದು ಬಯಲಾಗಿದೆ.

ಟಿಪ್ಪರ್ ಲಾರಿ ಹಾಗೂ ಮರಳು ಸಹಿತ ಅಂದಾಜು 4.07 ಲ.ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!