- Advertisement -
- Advertisement -
ಬೆಳ್ತಂಗಡಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನ ಸಮೇತ ಮರಳನ್ನು ಪತ್ತೆ ಹಚ್ಚುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.ಇಬ್ಬರು ಕುಖ್ಯಾತ ಮರಳು ಕಳ್ಳರು ಟಿಪ್ಪರ್ ಬಿಟ್ಟು ಪರಾರಿಯಾಗಿದ್ದು. ಇವರಿಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಸೋಮತ್ತಡ್ಕ ನಿವಾಸಿ ರಂಜಿತ್ ಗೌಡ ಎಂಬವರಿಗೆ ಸೇರಿದ ಲಕ್ಷ್ಮೀ ವೆಂಕಟೇಶ್ ಎಂಬ ಹೆಸರಿನ KA-21-B-5262 ಸಂಖ್ಯೆಯ ಟಿಪ್ಪರ್ ವಾಹನದಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುವಾಗ ಬೆಳ್ತಂಗಡಿ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೋಮಂತ್ತಡ್ಕ ನಿವಾಸಿ ಕುಖ್ಯಾತ ಮರಳು ಕಳ್ಳ ರಂಜಿತ್ ಗೌಡ ಮತ್ತು ರಾಧಾಕೃಷ್ಣ ಗೌಡ ಮೇಲೆ ಅಕ್ರಮ ಮರಳು ಕಳ್ಳತನ ಪ್ರಕರಣ ದಾಖಲಿಸಲಾಗಿದ್ದು. ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
- Advertisement -