Saturday, April 20, 2024
Homeಸಾಧಕರಿಗೆ ಸಲಾಂಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್.ಸುತಾರ ವಿಧಿವಶ

ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್.ಸುತಾರ ವಿಧಿವಶ

spot_img
- Advertisement -
- Advertisement -

ಬಾಗಲಕೋಟೆ: ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್.ಸುತಾರ ಅವರು ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಇಂದು ಮುಂಜಾನೆ ಅವರಿಗೆ ಹೃದಯಘಾತವಾಗಿತ್ತು.

ಇಬ್ರಾಹಿಂ ಎನ್. ಸುತಾರ ಎಂದೇ ಖಾತಿಯನ್ನು ಪಡೆದ ಇಬ್ರಾಹಿಂ ನಬೀ ಸಾಹೇಬ್ ಸುತಾರ 1940ರ ಮೇ 10 ರಂದು ಜನಿಸಿದ್ದರು.

ವೈದಿಕ, ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿದ್ದ ತತ್ವಪದಕಾರರು ಮತ್ತು ಪ್ರವಚನಕಾರರು. ಇವರಿಗೆ ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ 2018ರಲ್ಲಿ ಲಭಿಸಿತ್ತು.

ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಇಬ್ರಾಹಿಂ ಸುತಾರ ಅವರು 1970 ರಲ್ಲಿ ‘ಭಾವೈಕ್ಯ ಜನಪದ ಸಂಗೀತ ಮೇಳ’ ವನ್ನು ಸ್ಥಾಪಿಸಿದರು. ಕಳೆದ 44 ವರ್ಷಗಳಿಂದ ನಾಡಿನಾದ್ಯಂತ ಸಾಹಿತ್ಯ ವಾಚನ, ಪ್ರವಚನ, ಭಜನೆ ಮತ್ತು ಸಮಾಜಸೇವೆಯ ಮುಖಾಂತರ ಸರ್ವಮಹಾತ್ಮರ ಸಾಹಿತ್ಯವನ್ನು ಬಳಸಿ ಭಾವೈಕ್ಯತೆ ಸಂದೇಶವನ್ನು ಬೀರುತ್ತ ಬಂದಿರುತ್ತಾರೆ. ಪ್ರತಿವರ್ಷ ನೂರಾರು ಕಾರ್ಯಕ್ರಮಗಳನ್ನು ನೀಡುತ್ತ ಹಿಂದು-ಮುಸ್ಲಿಂ ರಲ್ಲಿ ಭಾವೈಕ್ಯತೆ ಬೆಸೆಯುವ ಪವಿತ್ರ ಕಾಯಕದಲ್ಲಿ ತೊಡಗಿಸಿಕೊಂಡಿದ್ದ. ಅವರಿಗೆ ನಾಡಿನ ಹಲವು ಪ್ರಶಸ್ತಿ, ಸನ್ಮಾನಗಳು ಲಭಿಸಿದ್ದವು.

- Advertisement -
spot_img

Latest News

error: Content is protected !!