- Advertisement -
- Advertisement -
ನವದೆಹಲಿ: ಕೊರೊನಾ ವೈರಸ್ ವಿರುದ್ಧ ಭಾರತದಲ್ಲಿ ಲಸಿಕೆ ವಿತರಣೆ ಯೋಜನೆ ಸಿದ್ಧವಾಗಿದೆ . ನಾಳೆಯಿಂದ ಲಸಿಕೆ ವಿತರಣೆ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದ್ದು ಈ ನಡುವೆ ಗರ್ಭಿಣಿಯರು, ಹಾಲುಣಿಸುವ ಬಾಣಂತಿಯರನ್ನು ಕೋವಿಡ್ 19 ಲಸಿಕೆ ಪ್ರಯೋಗಕ್ಕೆ ಒಳಪಡಿಸದ ಕಾರಣ ಸದ್ಯ ಅವರಿಗೆ ಲಸಿಕೆ ನೀಡಬಾರದು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ತಿಳಿಸಿದೆ.
ಈ ಕುರಿತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಮುಖೆನ ಆರೋಗ್ಯ ಸಚಿವಾಲಯವು ಮಾಹಿತಿನೀಡಿದೆ. ಗರ್ಭಿಣಿಯರು, ಹಾಲುಣಿಸುವ ಬಾಣಂತಿಯರಿಗೆ ಕೊರೊನಾ ಲಸಿಕೆ ನೀಡಬಾರದು, ತುರ್ತು ಸಂದರ್ಭಗಳಲ್ಲಿ 18 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಲಸಿಕೆ ನೀಡಬೇಕು ಎಂದು ಉಲ್ಲೇಖವಿದೆ
- Advertisement -