ಬೆಂಗಳೂರು : ಸದ್ಯ ರಾಜ್ಯಕ್ಕೆ ಕೊರೊನಾ ನೀಡಿರುವ ಹೊಡೆತದಿಂದ ಚೇತರಿಸಿಕೊಳ್ಳೋದಕ್ಕೆ ಕಡಿಮೆ ಅಂದರೂ ಒಂದೆರಡ ವರ್ಷವಂತೂ ಬೇಕೇ ಬೇಕು. ಎಲ್ಲಾ ಕ್ಷೇತ್ರಗಳಿಗೂ ಕೊರೊನಾ ಭಾರೀ ಹೊಡೆತ ನೀಡಿದೆ. ಈಗಲೇ ದಿನವೊಂದಕ್ಕೆ ರಾಜ್ಯದಲ್ಲಿ ವರದಿಯಾಗುತ್ತಿರುವ ಕೋವಿಡ್ ಹೊಸ ಪ್ರಕರಣಗಳನ್ನು ನೋಡಿದ್ರೆ ಆತಂಕ ಹೆಚ್ಚಾಗುತ್ತದೆ.
ಹೀಗಿರುವಾಗಲೇ ತಜ್ಞರು ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದ್ದಾರೆ. ಕರ್ನಾಟಕದಲ್ಲಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಕೊರೊನಾ ವೈರಸ್ ಅಬ್ಬರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹೆಚ್ಚಳವಾಗಲಿದೆ ಎಂದು ತಜ್ಞರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ರಾಜ್ಯದಲ್ಲಿ ಸದ್ಯ ಪತ್ತೆಯಾಗಿರುವ ಕೊರೊನಾ ವೈರಸ್ ಸೋಂಕು ಕೇವಲ ಆರಂಭ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಲಕ್ಷ ಲಕ್ಷ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 71,069 ಕ್ಕೆ ಏರಿಕೆಯಾಗಿದೆ. ಈಗಾಗಲೇ ಕೊರೊನಾ ಮಹಾಮಾರಿಗೆ 1,464 ಮಂದಿ ಬಲಿಯಾಗಿದ್ದಾರೆ. ಈ ಸಂಖ್ಯೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.