Thursday, May 9, 2024
Homeಚಿಕ್ಕಮಗಳೂರುಕಾಫಿನಾಡಲ್ಲಿ ನಿಲ್ಲದ ಕಾಡಾನೆ ಹಾವಳಿ; ಕಾಡಾನೆ ತುಳಿದು ಕಾರ್ಮಿಕ ಮಹಿಳೆ ಸಾವು

ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಹಾವಳಿ; ಕಾಡಾನೆ ತುಳಿದು ಕಾರ್ಮಿಕ ಮಹಿಳೆ ಸಾವು

spot_img
- Advertisement -
- Advertisement -

ಚಿಕ್ಕಮಗಳೂರು: ಕಾಡಾನೆಯ ದಾಳಿ ಪ್ರಕರಣವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಕಾರ್ಮಿಕ ಮಹಿಳೆಯೋರ್ವರು ಕಾಡಾನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಆಲ್ದೂರು ಅರಣ್ಯ ವಲಯದಲ್ಲಿ ನಡೆದಿದೆ.

ವೀಣಾ(45) ಮೃತಪಟ್ಟ ಕಾರ್ಮಿಕ ಮಹಿಳೆ. ಕಾಫಿ ತೋಟದ ಕೆಲಸಕ್ಕೆ ಹೋಗುವಾಗ ಈ ಘಟನೆಯು ನಡೆದಿದ್ದು, ಕಳೆದ ಎರಡು ತಿಂಗಳಲ್ಲಿ ನಡೆದ ಎರಡನೇ ಬಲಿ ಇದಾಗಿದೆ. 

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ 7 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅಲ್ಲೇ ಸುತ್ತಮುತ್ತಲಿನ ತೋಟಗಳಿಗೆ ಕಾಡಾನೆಯ ಹಾವಾಳಿ ಜಾಸ್ತಿಯಾಗಿದೆ. ಈ ಕುರಿತು ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಆನೆಗಳನ್ನ ಓಡಿಸುವಂತೆ ಪ್ರತಿಭಟನೆ ನಡೆಸಿ, ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಆಲ್ದೂರು ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. 

- Advertisement -
spot_img

Latest News

error: Content is protected !!