- Advertisement -
- Advertisement -
ಚಿಕ್ಕಮಗಳೂರು: ಕಾಡಾನೆಯ ದಾಳಿ ಪ್ರಕರಣವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಕಾರ್ಮಿಕ ಮಹಿಳೆಯೋರ್ವರು ಕಾಡಾನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಆಲ್ದೂರು ಅರಣ್ಯ ವಲಯದಲ್ಲಿ ನಡೆದಿದೆ.
ವೀಣಾ(45) ಮೃತಪಟ್ಟ ಕಾರ್ಮಿಕ ಮಹಿಳೆ. ಕಾಫಿ ತೋಟದ ಕೆಲಸಕ್ಕೆ ಹೋಗುವಾಗ ಈ ಘಟನೆಯು ನಡೆದಿದ್ದು, ಕಳೆದ ಎರಡು ತಿಂಗಳಲ್ಲಿ ನಡೆದ ಎರಡನೇ ಬಲಿ ಇದಾಗಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ 7 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅಲ್ಲೇ ಸುತ್ತಮುತ್ತಲಿನ ತೋಟಗಳಿಗೆ ಕಾಡಾನೆಯ ಹಾವಾಳಿ ಜಾಸ್ತಿಯಾಗಿದೆ. ಈ ಕುರಿತು ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಆನೆಗಳನ್ನ ಓಡಿಸುವಂತೆ ಪ್ರತಿಭಟನೆ ನಡೆಸಿ, ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಆಲ್ದೂರು ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
- Advertisement -