- Advertisement -
- Advertisement -
ಉಡುಪಿ : ಇನ್ನೇರಡು ದಿನಗಳಲ್ಲಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಣೆ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ನಾರಾಯಣ ಗುರು ನಿಗಮ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ.ಮನ್ನಿಸಿ… ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಬ್ದಾರಿ ನನ್ನದು ಎಂದು ಹೇಳಿದ್ದಾರೆ.
ಬಿಲ್ಲವ ಸಮುದಾಯದ ಹೋರಾಟದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾರಾಯಣ ಗುರು ನಿಗಮ ರಚಿಸುವುದಾಗಿ ಭರವಸೆ ನೀಡಿದ್ದರು. ಈ ಬಾರಿ ಬಜೆಟ್ ನಲ್ಲಿ ನಿಗಮ ಘೋಷಣೆಯಾಗಲಿದೆ ಎಂದು ಕರಾವಳಿಯ ಸಚಿವರು, ಶಾಸಕರು ಹೇಳಿದ್ದರು.
- Advertisement -