Thursday, April 25, 2024
Homeಕರಾವಳಿಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದ ಎನ್‌ಐಎ ತಂಡ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದ ಎನ್‌ಐಎ ತಂಡ

spot_img
- Advertisement -
- Advertisement -

ಮಂಗಳೂರು:  ಹಿಂದೂ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದೆ.

ಪ್ರಕರಣದಲ್ಲಿ ನೌಫ‌ಲ್‌(28), ಸೈನುಲ್‌ ಅಬಿದ್‌(22), ಮೊಹಮ್ಮದ್‌ ಸೈಯದ್‌(32), ಅಬ್ದುಲ್‌ ಬಶೀರ್‌(29) ಮತ್ತು ರಿಯಾಜ್‌(27) ಎಂಬುವರನ್ನು ಎನ್‌ಐಎ ಆರು ದಿನಗಳ (ಆ.23ರವರೆಗೆ) ವಶಕ್ಕೆ ಪಡೆದುಕೊಂಡಿದೆ.

ಜುಲೈ 27ರಂದು ಪ್ರವೀಣ್‌ ನೆಟ್ಟಾರ್‌ ಅವರನ್ನು ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈಯಲಾಗಿತ್ತು. ಈ ಸಂಬಂಧ ಕಾನೂನು ಬಾಹಿರ ಚಟುಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳ್ಳಾರೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ಗುರುವಾರ ಐವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸದ್ಯ ಐವರು ಆರೋಪಿಗಳು ಮಂಗಳೂರು ಜೈಲಿನಲ್ಲಿದ್ದು, ಅಲ್ಲಿಯೇ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!