- Advertisement -
- Advertisement -
ಉಜಿರೆ: ಧರ್ಮಸ್ಥಳದ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಸಂಗ್ರಹ ವಿಭಾಗವನ್ನು ಶನಿವಾರದಂದು ನವದೆಹಲಿಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮುಖ್ಯಸ್ಥ ಪ್ರದೀಪ್ ಭಾರದ್ವಾಜ್ ಉದ್ಘಾಟಿಸಿದರು.
ನಂತರದಲ್ಲಿ ಮಾತನಾಡಿದ ಅವರು, ‘ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು 50 ವರ್ಷಗಳಲ್ಲಿ ವಿಶೇಷ ಆಸಕ್ತಿ ಮತ್ತು ಕಾಳಜಿ ವಹಿಸಿ ದೇಶದ ಇತಿಹಾಸ, ಕಲೆ, ಸಂಸ್ಕೃತಿ, ಕಲಾಕೃತಿ, ತಾಳೆಗರಿಗ್ರಂಥ, ವಿಂಟೇಜ್ ಕಾರುಗಳನ್ನು ಸೇರಿದಂತೆ ಅನೇಕ ವಸ್ತುಗಳನ್ನು ಸಂರಕ್ಷಿಸಿ, ಪ್ರದರ್ಶನಕ್ಕಿಟ್ಟಿರುವುದು ವಿಶೇಷ ಸಾಧನೆಯಾಗಿದೆ,’ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿರೇಂದ್ರ ಹೆಗ್ಗಡೆ, ಮಂಜೂಷಾದ ಕ್ಯುರೇಟರ್ ಪುಷ್ಪದಂತ, ರಿತೇಶ್ಶರ್ಮ ಉಪಸ್ಥಿತರಿದ್ದರು.
- Advertisement -