Saturday, June 28, 2025
Homeತಾಜಾ ಸುದ್ದಿಡಿ.28 ರಂದು ಬೆಳ್ತಂಗಡಿಯಲ್ಲಿ ವಕೀಲರ ಭವನ ಉದ್ಘಾಟನೆ...!

ಡಿ.28 ರಂದು ಬೆಳ್ತಂಗಡಿಯಲ್ಲಿ ವಕೀಲರ ಭವನ ಉದ್ಘಾಟನೆ…!

spot_img
- Advertisement -
- Advertisement -

ಬೆಳ್ತಂಗಡಿ: ಸರ್ಕಾರದಿಂದ ಮಂಜೂರಾದ 2.10 ಕೋಟಿ ರೂ. ಅನುದಾನದಲ್ಲಿ ನಿರ್ಮಾಣಗೊಂಡ ವಕೀಲರ ಭವನದ ಉದ್ಘಾಟನೆಯು ಡಿ.28 ರಂದು ಸಂಜೆ 5.00 ಗಂಟೆಗೆ ನಡೆಯಲಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ.ಎಸ್ ಅವರು ಹೇಳಿದ್ದಾರೆ. ಬೆಳ್ತಂಗಡಿ ಸರಕಾರಿ ಪ್ರವಾಸಿ ಬಂಗಲೆಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಕ ಸೋಮಶೇಖರ್‌ ವಹಿಸಲಿದ್ದು, ಸಮಾರಂಭದಲ್ಲಿ ಕಾನೂನು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ, ಉಸ್ತುವಾರಿ ಸಚಿವ ಅಂಗಾರ, ಹೈಕೋರ್ಟ್ ನ್ಯಾಯಮೂರ್ತಿಗಳಾದ ಮುಹಮ್ಮದ್ ನವಾಝ್ ಮತ್ತು ವಿಶ್ವಜಿತ್‌ ಶೆಟ್ಟಿ, ಸರ್ವೋಚ್ಛ ನ್ಯಾಯಾಲಯದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್ ಭಾಗವಹಿಸಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದ ಯಶಸ್ಸಿಗಾಗಿ ಹಿರಿಯ ಕಿರಿಯ ವಕೀಲರುಗಳನ್ನೊಳಗೊಂಡ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಾರ್ವಜನಿಕರೂ ಕೂಡ ನಮ್ಮ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದರು.

ವಿಶೇಷ ಆಹ್ವಾನಿತರಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್, ಹರೀಶ ಕುಮಾರ್, ಎಸ್ ಎಲ್ ಭೋಜೇ ಗೌಡ, ರಾಜ್ಯ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿವಾಸ ಬಾಬು, ಪಿ.ಪಿ ಹೆಗ್ಡೆ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಶೈಲೇಶ್ ಆರ್ ಠೋಸರ್, ವಿವಿಧ ಪದಾಧಿಕಾರಿಗಳಾದ ಶಶಿಕರಣ್ ಜೈನ್, ಅಜಿತ್ ಕುಮಾರ್‌, ಶಿವಯ್ಯ ಎಸದ ಎಲ್, ಪಿ.ಆರ್.ನಾಯ್ಕ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!