ಮಂಗಳೂರು: ಪ್ರಸಿದ್ಧ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳದಲ್ಲಿ ಭಕ್ತಾಧಿಗಳಿಗಾಗಿ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿಯ ಉದ್ಘಾಟನೆಯು ಸೋಮವಾರದಂದು ನಡೆಯಿತು.
ಕೊರಗಜ್ಜನ ಆದಿಸ್ಥಳಕ್ಕೆ ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಭಕ್ತಾಧಿಗಳು ಬರುತ್ತಿದ್ದು, ಪಾರ್ಕಿಂಗ್, ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿಗಳ ಅವಶ್ಯಕತೆಯಿತ್ತು. ಇದೀಗ ಆದಿಸ್ಥಳದ ಸಮೀಪದಲ್ಲೇ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯನ್ನು ತುಂಗಾ ಗ್ರೂಪ್ ಆಫ್ ಹೊಟೇಲ್ಸ್ ಇದರ ಅಧ್ಯಕ್ಷ ಸುಧಾಕರ್ ಹೆಗ್ಡೆ ಅವರು ಉದ್ಘಾಟಿಸಿದರು. ನೂತನ ಬಸ್ ನಿಲ್ದಾಣವನ್ನು ಹಿರಿಯ ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು ವಿವೇಕ್ ಶೆಟ್ಟಿ ಬೊಳ್ಯಗುತ್ತು ಉದ್ಘಾಟಿಸಿದರು. ವಿಶ್ರಾಂತಿ ಕೊಠಡಿಗಳನ್ನು ಕುತ್ತಾರು ದೆಕ್ಕಾಡುವಿನ ಶ್ರೀ ಪಂಜಂದಾಯ ಬಂಟ, ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಅನುಮಂಶಿಕ ಆಡಳಿತ ಮೊಕ್ತೇಸರ ಮಾಗಣತ್ತಡಿ ಶ್ರೀಧರ್ ಶೆಟ್ಟಿ ಉದ್ಘಾಟಿಸಿದರು.
ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು ವಿವೇಕ್ ಶೆಟ್ಟಿ ಬೊಳ್ಯಗುತ್ತು ಮಾತನಾಡಿ, ‘ಕಳೆದ 5-6 ವರ್ಷಗಳಲ್ಲಿ ಕ್ರಾಂತಿಕಾರಿಯಾಗಿ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಕ್ಷೇತ್ರದ ಮಹಿಮೆ ಪರಿವರ್ತನೆಯಾಗಿದೆ. ಇಲ್ಲಿ ಸಾಮಾನ್ಯ ಭಕ್ತರು ಮಾತ್ರವಲ್ಲದೇ, ಖ್ಯಾತ ಚಿತ್ರ ನಟರು, ಸರಕಾರಿ ಅಧಿಕಾರಿಗಳ ಕೂಡ ಜಿಲ್ಲೆ, ಹೊರಜಿಲ್ಲೆ, ಹೊರರಾಜ್ಯಗಳಿಂದ ಆಗಮಿಸುತ್ತಿದ್ದಾರೆ. ಇನ್ನು ಭಕ್ತರಿಗೆ ಅನುಕೂಲವಾಗುವಂತೆ ಕ್ಷೇತ್ರದ ಸಮೀಪದಲ್ಲೇ ಪಾರ್ಕಿಂಗ್, ವಿಶ್ರಾಂತಿ ಕೊಠಡಿ, ಬಸ್ ನಿಲ್ದಾಣ ಹಾಗೂ ಶೌಚಾಲಯಗಳನ್ನು ನಿರ್ಮಿಸಲಾಗಿದ್ದು, ಎಲ್ಲರೂ ಸದುಪಯೋಗ ಪಡಿಸುವಂತಾಗಲಿ,’ ಎಂದು ಹಾರೈಸಿದರು.
ತಂತ್ರಿಗಳಾದ ಶ್ರೀ ಕೃಷ್ಣಕುನಿಕುಳ್ಳಾಯ ಇವರ ಆಶೀರ್ವಾದದೊಂದಿಗೆ ಅರ್ಚಕರಾದ ಸುರೇಶ್ ಕುನಿಕುಳ್ಳಾಯ ಮತ್ತು ಶ್ರೀಪ್ರಸಾದ ಭಟ್ ಗಣಹೋಮ ನೆರವೇರಿಸಿದರು.
ಈ ಸಂದರ್ಭ ಕ್ಷೇತ್ರದ ಅನುಮಂಶಿಕ ಆಡಳಿತ ಮೊಕ್ತೇಸರರಾದ ಮಾಗಣತ್ತಡಿ ಶ್ರೀಧರ್ ಶೆಟ್ಟಿ, ಕ್ಷೇತ್ರದ ಮೂಲ್ಯಣ್ಣೆ ಬಾಲಕೃಷ್ಣ ಸಾಲ್ಯಾನ್, ಶ್ರೀ ಪಂಜಂದಾಯ ಬಂಟ, ವೈದ್ಯನಾಥ ದೈವಗಳ ಮೂಲ್ಯಣ್ಣ ಬಾಲಕೃಷ್ಣ ಸಾಲ್ಯಾನ್, ಪ್ರಭಾಕರ್ ಶೆಟ್ಟಿ ಕುತ್ತಾರ್ ಗುತ್ತು, ಜಗನ್ನಾಥ್ ಶೆಟ್ಟಿ ಮಾಗಣತ್ತಡಿ, ದಾಮೋದರ್ ಪೂಜಾರಿ, ಭಾಲಕೃಷ್ಣ ರೈ, ಬಾಲಕೃಷ್ಣ ಅಡಪ, ರಘುಪತಿ, ಸುರೇಶ್ ಮಿತ್ತಗೆಲ, ಮುನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾಬಲ ಟಿ. ದೆಪ್ಪೆಲಿಮಾರ್, ದೇರಳಕಟ್ಟೆ ಶ್ರೀ ಅಯ್ಯಪ್ಪ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ್ ಅಡ್ಯಂತಾಯ, ಸೇಸಪ್ಪ ಮಿತ್ತಗೆಲ, ಹರೀಶ್ ಭಂಡಾರಬೈಲು, ವಿಶ್ವರಾಜ್ ಶೆಟ್ಟಿ, ಶ್ರೀಪ್ರಸಾದ್ ಆಳ್ವ, ಕೃಷ್ಣ ಮಡಿವಾಳ, ಲಕ್ಷಣ ಕೃಷ್ಣಕೋಡಿ, ಲೋಕೇಶ್ ಅಗೆಲ, ಸದಾನಂದ ಮರ್ಕೆದು, ದಾಮೋದರ್ ಪೂಜಾರಿ, ದೈವದ ಪಾತ್ರಿ ಯಾದ ಮಾಯಿಲ, ನವೀನ್ ಕೊಟ್ಟಾರಿ, ಪದ್ಮನಾಭ ಮರ್ಕೆದು, ದಯಾನಂದ ಮೂಲ್ಯ, ಪದ್ಮನಾಭ ಪೂಜಾರಿ, ಗಣೇಶ್ ಗಾಣದಮನೆ, ವಿನೋದ್, ಲೋಹಿತ್, ಹಾಗೂ ಮುಂತಾದವರು ಉಪಸ್ಥಿತರಿದ್ದರು.