ಪುತ್ತೂರು: ಆಗಸ್ಟ್ 22 ರಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನಲೆ ಪುತ್ತೂರಿನಿಂದ ವಿಟ್ಲದವರೆಗೆ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಶಿಕ್ಷೆ ಅನುಭವಿಸಿದ ಸ್ವಾತಂತ್ರ್ಯ ಸೇನಾನಿಗಳನ್ನು ಮತ್ತೆ ಯುವ ಜನತೆಗೆ ಪರಿಚಯಿಸುವ ಕಾರ್ಯವನ್ನು ಕಾಂಗ್ರೇಸ್ ಪಕ್ಷ ಸ್ವಾತಂತ್ರ್ಯ ನಡಿಗೆಯ ಮೂಲಕ ಮಾಡಲಿದೆ ಎಂದ ಅವರು ಪುತ್ತೂರಿನ ದರ್ಬೆ ವೃತ್ತದಿಂದ ಆಗಸ್ 22 ರಂದು ಬೆಳಿಗ್ಗೆ 9 ಗಂಟೆಗೆ ನಡಿಗೆಗೆ ಚಾಲನೆ ನೀಡಲಾಗುವುದು ಎಂದರು.
ಪುತ್ತೂರು: ಆಗಸ್ಟ್ 22 ರಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನಲೆ ಪುತ್ತೂರಿನಿಂದ ವಿಟ್ಲದವರೆಗೆ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಶಿಕ್ಷೆ ಅನುಭವಿಸಿದ ಸ್ವಾತಂತ್ರ್ಯ ಸೇನಾನಿಗಳನ್ನು ಮತ್ತೆ ಯುವ ಜನತೆಗೆ ಪರಿಚಯಿಸುವ ಕಾರ್ಯವನ್ನು ಕಾಂಗ್ರೇಸ್ ಪಕ್ಷ ಸ್ವಾತಂತ್ರ್ಯ ನಡಿಗೆಯ ಮೂಲಕ ಮಾಡಲಿದೆ ಎಂದ ಅವರು ಪುತ್ತೂರಿನ ದರ್ಬೆ ವೃತ್ತದಿಂದ ಆಗಸ್ 22 ರಂದು ಬೆಳಿಗ್ಗೆ 9 ಗಂಟೆಗೆ ನಡಿಗೆಗೆ ಚಾಲನೆ ನೀಡಲಾಗುವುದು ಎಂದರು.
ಪುತ್ತೂರಿನಿಂದ ವಿಟ್ಲವರೆಗೆ ಸುಮಾರು 15 ಕಿಲೋಮೀಟರ್ ದೂರದ ಈ ನಡೆಗೆಯಲ್ಲಾ ಜಿಲ್ಲಾ ಕಾಂಗ್ರೇಸ್ ನ ಎಲ್ಲಾ ಮುಖಂಡರು ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ವಿಟ್ಲದಲ್ಲಿ ನಡಿಗೆಯ ಸಮಾರೋಪ ಸಮಾರಂಭ ನಡೆಯಲಿದ್ದು, ಸಭೆಯಲ್ಲಿ ಕಾಂಗ್ರೇಸ್ ಮುಖಂಡ ನಿಕೇತ್ ರಾಜ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು. ನಡಿಗೆಯಲ್ಲಿ ಸುಮಾರು 2 ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಪುತ್ತೂರಿನಿಂದ ವಿಟ್ಲವರೆಗೆ ಸುಮಾರು 15 ಕಿಲೋಮೀಟರ್ ದೂರದ ಈ ನಡೆಗೆಯಲ್ಲಾ ಜಿಲ್ಲಾ ಕಾಂಗ್ರೇಸ್ ನ ಎಲ್ಲಾ ಮುಖಂಡರು ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ವಿಟ್ಲದಲ್ಲಿ ನಡಿಗೆಯ ಸಮಾರೋಪ ಸಮಾರಂಭ ನಡೆಯಲಿದ್ದು, ಸಭೆಯಲ್ಲಿ ಕಾಂಗ್ರೇಸ್ ಮುಖಂಡ ನಿಕೇತ್ ರಾಜ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು. ನಡಿಗೆಯಲ್ಲಿ ಸುಮಾರು 2 ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.