- Advertisement -
- Advertisement -
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪರ ಪ್ರಚಾರಕ್ಕೆ ಈ ಬಾರಿ ಮತ್ತೆ ಯೋಗಿ ಆದಿತ್ಯನಾಥ್ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಏ..26 ರಂದು ಬುಧವಾರ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ಪರವಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ನಡೆಸುತ್ತಾರೆ ಅಂತಾ ಹೇಳಲಾಗುತ್ತಿದೆ.
ಕಳೆದ ಬಾರಿ ಕೂಡ ರಾಜೇಶ್ ನಾಯ್ಕ್ ಅವರ ಪರವಾಗಿ ಯೋಗಿ ಆದಿತ್ಯನಾಥ್ ಕೈಕಂಬದಿಂದ ಬಿಸಿರೋಡಿನ ವೃತ್ತದ ವರಗೆ ರೋಡ್ ಶೋ ನಡೆಸಿದ್ದರು.ಅದೇ ಮಾದರಿಯಲ್ಲಿ ಮತ್ತೆ ಈ ಬಾರಿ ರೋಡ್ ಶೋ ನಡೆಸುತ್ತಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಬಿಜೆಪಿಯಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
- Advertisement -