- Advertisement -
- Advertisement -
ಬೆಂಗಳೂರು: ಹಲವು ದಿನಗಳ ಹಿಂದೆ ನಿಗದಿಯಾಗಿದ್ದ ಡಿ.ಕೆ.ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮರ್ಥ್ಯ ಹೆಗ್ಡೆ ನಿಶ್ಚಿತಾರ್ಥ ಇಂದು ನೆರವೇರಿತು.
ನಿಶ್ಚಿತಾರ್ಥ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು.ಈ ಹಿಂದೆ ಎಸ್.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಕುಟುಂಬದ ಸದಸ್ಯರು, ತಾಂಬೂಲ ಬದಲಾಯಿಸಿಕೊಂಡು ಅಮಾರ್ಥ್ಯ ಮತ್ತು ಐಶ್ವರ್ಯ ಅವರ ಮದುವೆ ನಿಶ್ಚಯ ಮಾಡಿದ್ದರು.
ವರ ಅಮರ್ಥ್ಯ ಅಮೆರಿಕದಲ್ಲಿ ಶಿಕ್ಷಣ ಪಡೆದಿದ್ದು ಅವರ ತಾಯಿ ಮಾಳವಿಕಾ ಅವರೊಂದಿಗೆ ಕಾಫಿ ಡೇ ಕಂಪನಿಯ ವ್ಯವಹಾರ ನಿರ್ವಹಿಸುತ್ತಿದ್ದಾರೆ. ಎಂಜಿನಿಯರಿಂಗ್ ಪದವೀಧರೆಯಾಗಿರುವ ಐಶ್ವರ್ಯ ಅವರು ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸಮಾರಂಭ ಕುಟುಂಬವರ್ಗದ ಉಪಸ್ಥಿತಿಯಲ್ಲಿ ನೆರವೇರಿತು.
- Advertisement -