- Advertisement -
- Advertisement -
ಇಸ್ಲಾಮಾಬಾದ್:’2019ರ ಫೆಬ್ರವರಿಯಲ್ಲಿ ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭಾರತ ದಾಳಿ ನಡೆಸಬಹುದು ಎಂದು ಪಾಕಿಸ್ತಾನದ ಪಾಕ್ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಸಂಸತ್ತಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು, ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥರು ಕಾಲು ವಿಪರೀತ ಭಯದಿಂದ ನಡುಗಿ ಹೋಗಿತ್ತು’ ಎಂದು ಅಲ್ಲಿನ ರಾಜಕೀಯ ನಾಯಕ ಆಯಾಝ್ ಸಾದಿಖ್ ಹೇಳಿದ್ದಾರೆ. ಈ ಹೇಳಿಕೆ ಈಗ ಭಾರಿ ಸುದ್ದಿಯಾಗಿದ್ದು, ರಾಷ್ಟ್ರ ಮಟ್ಟದಲ್ಲಿ ಭಾರತದ ಛಾಪು ಎದ್ದು ಕಾಣುತ್ತಿದೆ.
ಈ ಕಾರಣಕ್ಕಾಗಿಯೇ ಭಯದಿಂದ ನಂತರ ಇಮ್ರಾನ್ ಖಾನ್ ಸರ್ಕಾರ ಅಭಿನಂದನ್ ಅವರ ಬಿಡುಗಡೆಗೆ ತೀರ್ಮಾನಿಸಿತ್ತು ಎಂದು ಅವರು ತಿಳಿಸಿದ್ದಾರೆ.ನ್ಯಾಷನಲ್ ಅಸೆಂಬ್ಲಿಯಲ್ಲಿ ಮಾಡಿರುವ ಭಾಷಣದಲ್ಲಿ ಪಾಕಿಸ್ತಾನ ಮುಸ್ಲಿಂ ಲೀಗ್-ಎನ್(ಪಿಎಂಎಲ್-ಎನ್) ನಾಯಕ ಈ ವಿಷಯವನ್ನು ಹಂಚಿಕೊಂಡಿದ್ದು ವೀಡಿಯೋ ವೈರಲ್ ಆಗಿದೆ.
- Advertisement -