- Advertisement -
- Advertisement -
ಸುಳ್ಯ: ಏ.30 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸುಳ್ಯಕ್ಕೆ ಆಗಮಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಮತ ಪ್ರಚಾರ ನಡೆಸಲಿದ್ದಾರೆ.
ಇನ್ನೇನು ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ರಾಷ್ಟ್ರೀಯ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನಡ್ಡಾ ಭೇಟಿಯ ಬಳಿಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್, ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕರಾವಳಿಗೆ ಆಗಮಿಸಲಿದ್ದಾರೆ. ಆ ಮೂಲಕ ಹೇಗಾದ್ರೂ ಕಮಲ ಅರಳಿಸಬೇಕು ಅನ್ನೋ ನಿಟ್ಟಿನಲ್ಲಿ ನಾಯಕರು ಸಜ್ಜಾಗಿದ್ದಾರೆ.
- Advertisement -