- Advertisement -
- Advertisement -
ಜಕಾರ್ತ:ನಿನ್ನೆ ಇಂಡೊನೇಷ್ಯಾ ರಾಜಧಾನಿ ಜಕಾರ್ತದದಿಂದ ಶ್ರೀವಿಜಯ ಏರ್ ಏರ್ಲೈನ್ ಕಂಪನಿಯ ವಿಮಾನವೊಂದು ಟೇಕ್ಆಫ್ ಆದ ಕೆಲವೇ ನಿಮಿಷಗಳಲ್ಲಿ ಸಮುದ್ರದಲ್ಲಿ ಪತನವಾಗಿದೆ. ಜಾವಾ ಸಮುದ್ರದಲ್ಲಿ ಪತನಗೊಂಡಿದ್ದ ವಿಮಾನದ ಅವಶೇಷಗಳನ್ನು ಹುಡುಕುತ್ತಿರುವ ರಕ್ಷಣಾ ಸಿಬ್ಬಂದಿಗೆ ಮನುಷ್ಯರ ದೇಹದ ಭಾಗಗಳು, ಬಟ್ಟೆ ತುಂಡುಗಳು ಮತ್ತು ಲೋಹದ ತುಣುಕುಗಳು ದೊರೆತಿದೆ.
ಇಂಡೊನೇಷ್ಯಾ ರಾಷ್ಟ್ರೀಯ ರಕ್ಷಣಾ ಸಂಸ್ಥೆಯು ಈ ಬಗ್ಗೆ ಸ್ಪಷ್ಟನೆ ನೀಡಿದ್ದು ‘ಜಾವಾ ಸಮುದ್ರದಲ್ಲಿ ದೇಹದ ಭಾಗಗಳು, ಬಟ್ಟೆ ತುಂಡುಗಳು ಮತ್ತು ಲೋಹದ ತುಣುಕುಗಳು ದೊರೆತಿವೆ. ಈ ತುಣುಕುಗಳು ಲಂಕಾಂಗ್ ದ್ವೀಪ ಮತ್ತು ಲಕಿ ದ್ವೀಪದ ನಡುವೆ ಪತ್ತೆಯಾಗಿವೆ’ ಎಂದು ಮಾಹಿತಿ ನೀಡಿದೆ.
- Advertisement -