Friday, May 17, 2024
Homeಕರಾವಳಿಧರ್ಮಸ್ಥಳ : ರಾಜ್ಯ ಸಭೆಯ ಸದಸ್ಯರಾದ ಡಾ.ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿಯಾಗಿ ಕೆ.ಎನ್.ಜನಾರ್ದನ್ ನೇಮಕ

ಧರ್ಮಸ್ಥಳ : ರಾಜ್ಯ ಸಭೆಯ ಸದಸ್ಯರಾದ ಡಾ.ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿಯಾಗಿ ಕೆ.ಎನ್.ಜನಾರ್ದನ್ ನೇಮಕ

spot_img
- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ.ವಿರೇಂದ್ರ ಹೆಗ್ಗಡೆಯವರನ್ನು ಕೇಂದ್ರ ಸರಕಾರ ರಾಜ್ಯ ಸಭೆಯ ಸದಸ್ಯರಾಗಿ ನೇಮಕ ಮಾಡಿದ್ದು, 21 ರಂದು ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿಕೊಂಡರು.

ಇನ್ನೂ ಡಾ.ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿಯಾಗಿ ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ(ರಿ.) ಯ ವ್ಯವಸ್ಥಾಪಕ ನಿರ್ದೇಶಕ (MD)  ಅಗಿರುವ  ಕೆ.ಎನ್.ಜನಾರ್ದನ್ ಅವರನ್ನು ನೇಮಕ ಮಾಡಿಕೊಂಡಿದ್ದಾರೆ.

ಆಪ್ತಕಾರ್ಯದರ್ಶಿಯಾಗಿ ಆಯ್ಕೆಯಾಗಿ ಬಂದ ಜನಾರ್ದನ್ ಅವರನ್ನು ಸಿರಿ ಗ್ರಾಮೋದ್ಯೋಗ ಸಂಸ್ಥೆ ಉಜಿರೆ ಕಚೇರಿಯಲ್ಲಿ ಸ್ವಾಗತಿಸಿ ಅಭಿನಂದನಾ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಜನಾರ್ದನ್ ಅವರಿಗೆ ಸಿರಿ ಸಂಸ್ಥೆಯ ಸಿಬ್ಬಂದಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕರಾದ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ ಉಪಸ್ಥಿತರಿದ್ದರು ಹಾಗೂ ಸಿರಿ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದರು.

- Advertisement -
spot_img

Latest News

error: Content is protected !!