- Advertisement -
- Advertisement -
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ಸ್ಪರ್ಧಿಸಿ ಗೆದ್ದು ಶಾಸಕರಾಗಿರುವ ಜನಾರ್ದನ ರೆಡ್ಡಿ ಇದೀಗ ಮರಳಿ ಮಾತೃ ಪಕ್ಷ ಸೇರಿದ್ದಾರೆ.
ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಾರ್ಟಿ ಭಾವುಟ ನೀಡಿ ಬರಮಾಡಿಕೊಂಡರು.
ಈ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಸಿ. ಟಿ. ರವಿ, ಶ್ರೀ ಬಿ. ಶ್ರೀರಾಮುಲು, ಸಂಸದರಾದ ಪಿ. ಸಿ. ಮೋಹನ್ ಮುಂತಾದವರು ಉಪಸ್ಥಿತಿರಿದ್ದರು.
- Advertisement -