ಮಂಗಳೂರು ವಿಮಾನ ನಿಲ್ದಾಣದಲ್ಲೇ ಹೃದಯಾಘಾತವಾಗಿ ಕರ್ಣಾಟಕ ಬ್ಯಾಂಕ್ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.
ನಿನ್ನೆ ಮಧ್ಯಾಹ್ನ ಮುಂಬಯಿನಿಂದ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅವರಿಗೆ ಹಠಾತ್ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. 2009ರ ಕರ್ನಾಟಕ ಬ್ಯಾಂಕ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದು ಮೂರು ಅವಧಿಗೆ ಬ್ಯಾಂಕ್ ನಾಯಕತ್ವ ವಹಿಸಿದ್ದರು.
ಅವರ ಅವಧಿಯಲ್ಲಿ ಇ-ಲಾಬಿ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್, ಆನ್ಲೈನ್ ಟ್ರೇಡಿಂಗ್ ಅಕೌಂಟ್, ಟ್ರಾವೆಲ್ ಕಾರ್ಡ್, ಗಿಫ್ಟ್ ಕಾರ್ಡ್ ಮುಂತಾದ ಯಶಸ್ವಿ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಭಾರೀ ಮೆಚ್ಚುಗೆ ಗಳಿಸಿದ್ದು ಮಾತ್ರವಲ್ಲದೇ ಅವರ ಆಡಳಿತ ಅವಧಿಯಲ್ಲಿ ಕರ್ಣಾಟಕ ಬ್ಯಾಂಕ್ ಸರ್ವಾಂಗೀಣ ಪ್ರಗತಿ ಕಂಡಿತ್ತು. ಜಯರಾಮ್ ಭಟ್ ಅವರಿಗೆ ಅತ್ಯುತ್ತಮ ಮ್ಯಾನೇಜರ್ ಅವಾರ್ಡ್, ಅತ್ಯುತ್ತಮ ಸಾಧಾನಾ ಪ್ರಶಸ್ತಿ, ಮಣಿಪಾಲ ವಿವಿಯಿಂದ 2015ರ ಹೊಸ ವರ್ಷದ ಪ್ರಶಸ್ತಿ ಪಡೆದುಕೊಂಡಿದ್ದರು.