Saturday, June 28, 2025
Homeಪ್ರಮುಖ-ಸುದ್ದಿಜೆಡಿಎಸ್ ಕಾರ್ಯಕರ್ತರಿಂದಲೇ ನಿಖಿಲ್ ಕುಮಾರಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

ಜೆಡಿಎಸ್ ಕಾರ್ಯಕರ್ತರಿಂದಲೇ ನಿಖಿಲ್ ಕುಮಾರಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

spot_img
- Advertisement -
- Advertisement -

ಬೆಂಗಳೂರು : ಜೆಡಿಎಸ್ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿಗೆ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದಿಂದ ಹೊರಡಿ ಎಂದು ತರಾಟೆಗೆ ಎಂದು ಜೆಡಿಎಸ್ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿ ಮುಖಂಡ ಮುನಿರತ್ನ ಅವರಿಗೆ ನಿಖಿಲ್, ಹುಟ್ಟುಹಬ್ಬ ಶುಭಾಶಯ ಕೋರಿದ್ದರು. ಇದು ಜೆಡಿಎಸ್ ಕಾರ್ಯಕರ್ತರನ್ನು ಕೆರಳಿಸದೆ. ನಮಗೆಲ್ಲ ನೋವು ಕೊಡಬೇಡಿ, ಹೀಗೆ ಬಹಿರಂಗವಾಗಿ ಫೋಟೋ ಹಾಕಿ ನಿಷ್ಠಾವಂತ ಕಾರ್ಯಕರ್ತರ ಮಾನ ಮರ್ಯಾದೆ ಹಾಳು ಮಾಡುವ ಬದಲು ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರಸ್ವಾಮಿ, ಮುನಿರತ್ನ ಅವರ ಹುಟ್ಟಹಬ್ಬಕ್ಕೆ ಶುಭ ಕೋರಿದ್ದಕ್ಕೆ ಹಲವರು ಆಕ್ಷೇಪಿಸಿರುವುದು ನನ್ನ ಗಮನಕ್ಕೆ ಬಂತು . ‘ ಕುಮಾರಸ್ವಾಮಿ ಅವರಿಗೆ ದ್ರೋಹ ಬಗೆದವರಿಗೆ ನೀವು ಶುಭಕೋರಬಾರದಿತ್ತು ‘ ಎಂಬ ಅಭಿಪ್ರಾಯ ವ್ಯಕ್ತವಾಗಿದೆ . ಎಲ್ಲರ ಅಭಿಪ್ರಾಯಗಳನ್ನೂ ಗೌರವಿಸುತ್ತೇನೆ . ನಿರ್ಮಾಪಕನಿಗೆ ನಟನಾಗಿ ನಾನು ಶುಭಕೋರಿದ್ದೇನೇ ಹೊರತು ಯುವ ಜನತಾದಳ ನಾಯಕನಾಗಿ ಅಲ್ಲ .

ರಾಜಕೀಯ ಸಂಘರ್ಷಗಳನ್ನು ಮೀರಿ ದೇವೇಗೌಡರು ಮೋದಿ ಅವರಿಗೆ ಶುಭ ಕೋರುತ್ತಾರೆ . ಮೋದಿ ದೇವೇಗೌಡರಿಗೆ ಶುಭ ಕೋರುತ್ತಾರೆ . ಯಡಿಯೂರಪ್ಪನವರು ಕುಮಾರಸ್ವಾಮಿ ಅವರಿಗೆ ಶುಭ ಆಶಿಸುತ್ತಾರೆ . ಕುಮಾರಸ್ವಾಮಿ ಅವರೂ ಶುಭಾರೈಕೆಗಳನ್ನು ತಿಳಿಸುತ್ತಾರೆ . ಇದು ಕರ್ನಾಟಕದ ರಾಜಕೀಯದ ಸತ್ಸಂಪ್ರದಾಯ . ಹೀಗಾಗಿ ನನ್ನ ಶುಭಕೋರಿಕೆಯಲ್ಲಿ ತಪ್ಪಿರದು ಎಂದು ಭಾವಿಸುತ್ತೇನೆ .

ಮುನಿರತ್ನ ರಾಜಕೀಯವಾಗಿ ಕುಮಾರಸ್ವಾಮಿ ಅವರಿಗೆ ಏನೇ ಮಾಡಿರಬಹುದು . ಅವುಗಳಿಗೆ ಕಣದಲ್ಲಿ ಉತ್ತರಿಸುವ ಪ್ರಯತ್ನ ಮಾಡೋಣ . ಅದರಲ್ಲಿ ಎರಡು ಮಾತಿಲ್ಲ . ಕಾರ್ಯಕರ್ತನಾಗಿ , ಯುವ ಜನತಾದಳದ ಮುಂದಾಳುವಾಗಿ ನನ್ನ ದುಡಿಮೆ ಪಕ್ಷಕ್ಕೆ ಮಾತ್ರ ಎಂದು ಸ್ಪಷ್ಟನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!