- Advertisement -
- Advertisement -
ಕಾರ್ಕಳ: ಚಿನ್ನದ ವ್ಯವಹಾರದಲ್ಲಿ ಗ್ರಾಹಕರಿಗೆ ವಂಚಿಸಿದ ಜ್ಯುವೆಲ್ಲರಿ ಶಾಪ್ ಮಾಲೀಕನಿಗೆ ನ್ಯಾಯಾಲಯ 26 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ನಗರದ ಮಾರ್ಕೆಟ್ ರಸ್ತೆಯಲ್ಲಿ ಶ್ರೀದುರ್ಗ ಜುವೆಲ್ಲರ್ಸ್ ಮಾಲೀಕ ರವೀಂದ್ರ ಆಚಾರ್ಯ ಯಾನೆ ರವೀಂದ್ರ ಶಿಕ್ಷೆಗೊಳಗಾದ ವ್ಯಕ್ತಿ. ಗ್ರಾಹಕರಿಂದ ಚಿನ್ನ ಪಡೆದು ಹೊಸ ಡಿಸೈನ್ ಮಾಡಿಕೊಡೋದಾಗಿ ಹೇಳಿ ಹಲವರಿಗೆ ವಂಚಿಸಿದ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಕಾರ್ಕಳ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಚೇತನಾ ಎಸ್.ಎಫ್. ಅವರು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.
- Advertisement -