Sunday, May 12, 2024
Homeಕರಾವಳಿಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ್ಯಾಯಾಂಗ ಬಂಧನ

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಬಿಗ್‌ಬಾಸ್ ಮನೆಯಿಂದಲೇ ಬಂಧನಕ್ಕೊಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಸಂತೋಷ್ ಅವರನ್ನು ಅರಣ್ಯ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹಬ್ಬದ ಪ್ರಯುಕ್ತ ಎರಡು ದಿನಗಳ ಕಾಲ ಕೋರ್ಟ್‌ ರಜೆ ಇದ್ದ ಕಾರಣ ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ಜಡ್ ನಿವಾಸಕ್ಕೆ ಕರೆದೊಯ್ದು ಸಂತೋಷ್‌ರನ್ನು ಹಾಜರು ಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಚಾರಣಾ ಹೇಳಿಕೆಯಲ್ಲಿ ಅಧಿಕಾರಿಗಳ ಮುಂದೆ ಸಂತೋಷ್, ‘ಅಪರಿಚಿತರು ಹುಲಿ ಉಗುರನ್ನು ಮಾರಲು ತಂದಿದ್ದು, ಗೆಳೆಯನೊಬ್ಬನಿಂದ ಈ ವಿಚಾರವನ್ನು ತಿಳಿದುಕೊಂಡೆ. ಅವರು ಯಾರು, ಎಲ್ಲಿಂದ ಬಂದಿದ್ದರು ಎಂಬ ವಿಚಾರ ನನಗೆ ಗೊತ್ತಿಲ್ಲ. ಹಣ ಕೊಟ್ಟು ಇದನ್ನು ಖರೀದಿಸಿದೆ ಎಂದು ಹೇಳಿದ್ದಾರೆ.

ಸದ್ಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವರ್ತೂರು ಸಂತೋಷ್ ಅವರನ್ನು ಪರಪ್ಪನ ಅಗ್ರಹಾರಕ್ಕೆ ರವಾನಿಸಲಾಗಿದೆ. ಕಿರುತೆರೆ ಇತಿಹಾಸದಲ್ಲಿ ಜನಪ್ರಿಯ ಶೋ ಆಗಿರುವ ಬಿಗ್‌ಬಾಸ್ ನಲ್ಲಿ ವರ್ತೂರು ಸಂತೋಷ್ ಸ್ಪರ್ಧಿಯಾಗಿದ್ದರು. ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟು 2 ವಾರಗಳಷ್ಟೇ ಆಗಿತ್ತು. ಬಿಗ್ ಬಾಸ್ ಮನೆಯಲ್ಲಿದ್ದಾಗಲೇ ಬಂಧನವಾಗಿದ್ದು, ಈ ರೀತಿ ಆಗಿರುವುದು ಬಿಗ್‌ಬಾಸ್ ಇತಿಹಾಸದಲ್ಲೇ ಮೊದಲಾಗಿದೆ.

- Advertisement -
spot_img

Latest News

error: Content is protected !!