- Advertisement -
- Advertisement -
ಪತ್ರಾ ಚಾಲ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಸೆಪ್ಟೆಂಬರ್ 5 ರವರೆಗೂ ವಿಸ್ತರಣೆ ಮಾಡಿದೆ.
ಆಗಸ್ಟ್ 8ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು ಸೋಮವಾರ (ಇಂದು) ಅವರ ಬಂಧನ ಅವಧಿ ಮುಗಿದಿದೆ . ಇದಾದ ನಂತರ ವಿಶೇಷ ಪಿಎಂಎಲ್ಎ ನ್ಯಾಯಾಲಯ ರಾವತ್ ಬಂಧನವನ್ನು ಸೆಪ್ಟೆಂಬರ್ 5ರವರೆಗೆ ವಿಸ್ತರಿಸಿದೆ. ಪ್ರಸ್ತುತ ರಾವತ್ ಅವರು ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.
ಗೋರೆಗಾಂವ್ನ ಉಪನಗರದಲ್ಲಿರುವ ಪತ್ರಾ ಚಾಲ್ (ಸಾಲು ವಠಾರ) ಮರುಅಭಿವೃದ್ಧಿಯಲ್ಲಿನ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ 60 ವರ್ಷದ ಸಂಜಯ್ ರಾವುತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.
- Advertisement -