- Advertisement -
- Advertisement -
ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಆಡುತ್ತಿದ್ದ ಇಸ್ಪೀಟ್ ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಚ್ಚೂರು ರಸ್ತೆಯ ರಾಘವೇಂದ್ರ ಮಠದ ಬಳಿ ನಡೆದಿದೆ.
ಹರೀಶ್ ಪೂಜಾರಿ, ಆಶೀತ್, ಮಂಜುನಾಥ ಶೆಟ್ಟಿ, ದಿನೇಶ್ ಪೂಜಾರಿ, ಸುದಾಕರ ದೇವಾಡಿಗ ಈ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಹೆಬ್ರಿ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುದರ್ಶನ ದೊಡಮನಿ ಅವರು ಇತರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -