- Advertisement -
![]()
- Advertisement -
ಮಂಗಳೂರು; ಭಾರೀ ಮಳೆ ಹಿನ್ನೆಲೆ ನಾಳೆ (ಜುಲೈ 18) ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಬಂಟ್ವಾಳ,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಇನ್ನುಳಿದಂತೆ ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕುಗಳಲ್ಲಿ ಎಂದಿನಂತೆ ಶಾಲೆಗಳಲ್ಲಿ ತರಗತಿಗಳು ನಡೆಲಿವೆ.
- Advertisement -


