Wednesday, April 16, 2025
Homeತಾಜಾ ಸುದ್ದಿನೀವು ಸೆಲೆಬ್ರೆಟಿ ಅಂದ ಮಾತ್ರಕ್ಕೆ ನಿಮಗೆ ಬೇರೆ ಊಟ ಕೊಡಲು ಆಗಲ್ಲ; ನಟ ದರ್ಶನ್ ರನ್ನು...

ನೀವು ಸೆಲೆಬ್ರೆಟಿ ಅಂದ ಮಾತ್ರಕ್ಕೆ ನಿಮಗೆ ಬೇರೆ ಊಟ ಕೊಡಲು ಆಗಲ್ಲ; ನಟ ದರ್ಶನ್ ರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

spot_img
- Advertisement -
- Advertisement -

ಬೆಂಗಳೂರು : ಜೈಲೂಟದಿಂದ ಆರೋಗ್ಯ ಸಮಸ್ಯೆಯಾಗುತ್ತಿದೆ.ಹಾಗಾಗಿ ಮನೆಯೂಟಕ್ಕೆ ಅವಕಾಶ ನೀಡಬೇಕೆಂದು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು.

ವಿಚಾರಣೆ ವೇಳೆ ಹೈಕೋರ್ಟ್ ದರ್ಶನ್ ಪರವಾದ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ಪೀಠ ಅನಾರೋಗ್ಯ ತುಂಬಾ ಬಿಗಡಾಯಿಸಿದ್ದರೆ ಅದನ್ನು ಜೈಲು ವೈದ್ಯರು ಪರಿಗಣಿಸುತ್ತಾರೆ. ವೈದ್ಯರು ಏನು ಸೂಚಿಸುತ್ತಾರೋ ಅದನ್ನು ಜೈಲಿನಲ್ಲಿ ನೀಡುತ್ತಾರೆ. ಸೆಲೆಬ್ರಿಟಿ ಆದ ಮಾತ್ರಕ್ಕೆ ಬೇರೆ ಆಹಾರ ಕೇಳಲು ಸಾಧ್ಯವಿಲ್ಲ ಎಂದು ಎಂದಿದೆ.

ವಿಚಾರಣಾಧೀನ ಖೈದಿಗಳು ಖಾಸಗಿಯಾಗಿ ಆಹಾರ ತರಿಸಿಕೊಳ್ಳಬಹುದು. ಜೈಲು ಅಧಿನಿಯಮ ಸೆಕ್ಷನ್ 30ರ ಅಡಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ಜೈಲು ಕೈಪಿಡಿ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ನಿರಾಕರಿಸಿದೆ. ಜೈಲು ಕೈಪಿಡಿಗೆ ಕಾನೂನಿನ ಬೆಂಬಲವಿಲ್ಲ. ಕೈಪಿಡಿಯಲ್ಲಿರುವುದು ಕೇವಲ ಆಡಳಿತಾತ್ಮಕ ನಿಯಮಗಳಷ್ಟೇ ಎಂದು ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು.

ದರ್ಶನ್​ಗೆ ಪೌಷ್ಟಿಕ ಆಹಾರ ನೀಡಬೇಕೆಂದು ಜೈಲಿನ ವೈದ್ಯಾಧಿಕಾರಿಯೂ ಸಲಹೆ ನೀಡಿದ್ದಾರೆ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು. ಇದಕ್ಕೆ ಉತ್ತರಿಸಿದ ಜಡ್ಜ್ ‘ಸಾವಿರಾರು ವಿಚಾರಣಾಧೀನ ಖೈದಿಗಳಿಗೆ ಪೌಷ್ಟಿಕ ಆಹಾರದ ಅಗತ್ಯ ಇರಬಹುದು. ದರ್ಶನ್​ಗೂ ಇತರೆ ವಿಚಾರಣಾಧೀನ ಕೈದಿಗಳಿಗೂ ವ್ಯತ್ಯಾಸವಿಲ್ಲ ಎಂದಿದ್ದಾರೆ.

ಜೈಲು ಅಧಿಕಾರಿಗಳಿಗೆ ದರ್ಶನ್ ಮನವಿ ಸಲ್ಲಿಸಿದ್ದಾರೆ. ಅದನ್ನು ಪರಿಗಣಿಸಲು ಒಂದು ವಾರ ಕಾಲಾವಕಾಶ ಕೊಡಿ.ಮನವಿಯನ್ನು ಮಾನವೀಯತೆಯಿಂದ ಅಧಿಕಾರಿಗಳು ಪರಿಗಣಿಸಲಿ ಎಂದು ದರ್ಶನ್ ಪರ ವಕೀಲರು ಕೋರಿದರು. ಎಲ್ಲ ಕೈದಿಗಳ ಬಗ್ಗೆಯೂ ಇದೇ ಮಾನವೀಯತೆ ಇರಬೇಕು. ಸೆಲೆಬ್ರಿಟಿ ಎಂದು ಬೇರೆ ನಿಯಮಗಳು ಇರುವುದಿಲ್ಲ ಎಂದು ಹೇಳಿ ಆಗಸ್ಟ್ 20ಕ್ಕೆ ವಿಚಾರಣೆ ಮುಂದೂಡಿತು.

- Advertisement -
spot_img

Latest News

error: Content is protected !!