Tuesday, May 21, 2024
Homeಕರಾವಳಿಮಂಜೇಶ್ವರದಲ್ಲಿ ಸೆಕ್ಯೂರಿಟಿ ಗಾರ್ಡ್ ನ್ನು ಕಟ್ಟಿ ಹಾಕಿ ಜ್ಯುವೆಲ್ಲರಿ ಶಾಪ್ ದರೋಡೆ

ಮಂಜೇಶ್ವರದಲ್ಲಿ ಸೆಕ್ಯೂರಿಟಿ ಗಾರ್ಡ್ ನ್ನು ಕಟ್ಟಿ ಹಾಕಿ ಜ್ಯುವೆಲ್ಲರಿ ಶಾಪ್ ದರೋಡೆ

spot_img
- Advertisement -
- Advertisement -

ಕಾಸರಗೋಡು : ಸೆಕ್ಯೂರಿಟಿ ಗಾರ್ಡ್ ನ್ನು  ಕಟ್ಟಿ ಹಾಕಿ ಜುವೆಲ್ಲರಿ ಶಾಪ್ ನಿಂದ ಸುಮಾರು 15 ಕೆಜಿ ಬೆಳ್ಳಿ ಆಭರಣ ಹಾಗೂ 4 ಲಕ್ಷ ರೂ. ನಗದು ದರೋಡೆ ಮಾಡಿದ ಘಟನೆ ಇಂದು ನಸುಕಿನ ಜಾವ ಮಂಜೇಶ್ವರದ ಹೊಸಂಗಡಿಯಲ್ಲಿ ನಡೆದಿದೆ.

ದರೋಡೆಕೋರರ ಹಲ್ಲೆಯಿಂದ ಗಂಭೀರ ಗಾಯಗೊಂಡ ಸೆಕ್ಯೂರಿಟಿ ಗಾರ್ಡ್ ಅಬ್ದುಲ್ಲಾ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳವನ್ನು ತನಿಖಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!