- Advertisement -
- Advertisement -
ಬೆಂಗಳೂರು: ಕೆಲವು ದಿನಗಳಿಂದ ಹಲವು ತಿರುವು ಪಡೆದು ಕೊಂಡಿದ್ದ ಗೀತ ರಚನೆಕಾರ ಕೆ.ಕಲ್ಯಾಣ್ ಅವರ ದಾಂಪತ್ಯ ಕಲಹ ಕೊನೆಗೂ ಮುಗಿಯುವ ಸೂಚನೆ ಕಾಣಿಸುತ್ತಿದೆ.ತಮ್ಮ ಪತಿಯ ವಿರುದ್ಧ ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಕಳೆದ ಜೂನ್ 16ರಂದು ಬೆಳಗಾವಿಯ ಕೌಟುಂಬಿಕ ಕೋರ್ಟ್ಗೆ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ವಾಪಸ್ ಪಡೆಯಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.
ಇಂದು ಬೆಳಗಾವಿ ಕೌಟುಂಬಿಕ ಕೋರ್ಟ್ಗೆ ತೆರಳಿ ಅರ್ಜಿ ವಾಪಸ್ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮಾಟ, ಮಂತ್ರದಿಂದಾಗಿ ತಮ್ಮ ದಾಂಪತ್ಯದಲ್ಲಿ ಬಿರುಕು ಉಂಟಾಗಿರುವುದಾಗಿ ಕಲ್ಯಾಣ್ ಹೇಳಿದ್ದರು. ಪತ್ನಿಯ ಖಾತೆಯಿಂದ ಹಣ ತೆಗೆಯಲಾಗಿದೆ ಎಂದು ಕಲ್ಯಾಣ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಶಿವಾನಂದ ವಾಲಿಯನ್ನು ಬಂಧಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ವಿಚ್ಛೇದನದ ಅರ್ಜಿ ವಾಪಸ್ ಪಡೆಯಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.
- Advertisement -