Monday, April 29, 2024
Homeಶಿವಮೊಗ್ಗಶಿವಮೊಗ್ಗ:ಕೆ ಎಸ್ ಈಶ್ವರಪ್ಪ ಜೊತೆಗಿನ ಬಿಜೆಪಿ ನಾಯಕರ ಸಂಧಾನ ವಿಫಲ; ಕೆ.ಎಸ್ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ...

ಶಿವಮೊಗ್ಗ:ಕೆ ಎಸ್ ಈಶ್ವರಪ್ಪ ಜೊತೆಗಿನ ಬಿಜೆಪಿ ನಾಯಕರ ಸಂಧಾನ ವಿಫಲ; ಕೆ.ಎಸ್ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

spot_img
- Advertisement -
- Advertisement -

ಶಿವಮೊಗ್ಗ: ಶಿವಮೊಗ್ಗ: ಕೆ ಎಸ್ ಈಶ್ವರಪ್ಪ ಜೊತೆಗಿನ ಬಿಜೆಪಿ ನಾಯಕರ ಸಂಧಾನ ವಿಫಲವಾಗಿದ್ದು ಕೆ.ಎಸ್ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸೋದು ಖಚಿತವಾಗಿದೆ.

 ಬಂಡಾಯ ಬಾವುಟ ಹಾರಿಸಿದ್ದ ಕೆ.ಎಸ್ ಈಶ್ವರಪ್ಪ ಅವರನ್ನು ತಣಿಸೋದಕ್ಕೆ ಬಿಜೆಪಿ ನಾಯಕರು ಮಾಡಿದಂತ ಸಂಧಾನ ಫಲಪ್ರದವಾಗಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕೆ.ಎಸ್ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತವಾಗಿದೆ.

ನಾಳೆ ಶಿವಮೊಗ್ಗ ಜಿಲ್ಲೆಗೆ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಆಗಮನಿಸುತ್ತಿದ್ದಾರೆ. ಮೋದಿ ರೋಡ್ ಶೋ ಕೂಡ ನಡೆಸಲಿದ್ದಾರೆ. ಸುಮಾರು ಎರಡು ಲಕ್ಷ ಜನರು ಸೇರುವ ನಿರೀಕ್ಷೆ ಇದೆ.

ಇದೇ ಸಂದರ್ಭದಲ್ಲಿ ಬಂಡಾಯ ಬಾವುಟವನ್ನು ಹಾರಿಸಿದ್ದಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಇಳಿದಿದ್ದರು. ಆದರೆ ಯಾವುದೇ ನಾಯಕರ ಮಾತನ್ನು ಈಶ್ವರಪ್ಪ ಕೇಳಿಲ್ಲ ಎನ್ನಲಾಗಿದೆ. ಹೀಗಾಗಿ ನಾಳೆ ಮೋದಿ ಕಾರ್ಯಕ್ರಮದಿಂದ ದೂರು ಉಳಿಯುವ ನಿರ್ಧಾರ ಕೈಗೊಂಡಿದ್ದಾರೆ.

- Advertisement -
spot_img

Latest News

error: Content is protected !!