Sunday, May 5, 2024
Homeಕರಾವಳಿರಸ್ತೆ ಡಿವೈಡರ್ ಗೆ ಬೈಕ್ ಡಿಕ್ಕಿ: ಹಿರಿಯ ಆರೆಸ್ಸೆಸ್ ಮುಖಂಡ ವೆಂಕಟರಮಣ ಹೊಳ್ಳ ನಿಧನ

ರಸ್ತೆ ಡಿವೈಡರ್ ಗೆ ಬೈಕ್ ಡಿಕ್ಕಿ: ಹಿರಿಯ ಆರೆಸ್ಸೆಸ್ ಮುಖಂಡ ವೆಂಕಟರಮಣ ಹೊಳ್ಳ ನಿಧನ

spot_img
- Advertisement -
- Advertisement -

ಪುತ್ತೂರು: ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಇಂದು ನಸುಕಿನಲ್ಲಿ ಬೈಕ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಬಂಟ್ವಾಳ ನಿವಾಸಿ ವೆಂಕಟ್ರಮಣ ಹೊಳ್ಳ ಸಾವನ್ನಪ್ಪಿದ್ದಾರೆ.

ವೆಂಕಟ್ರಮಣ ಹೊಳ್ಳ ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ ಸಂಭವಿಸಿದೆ.

ವೆಂಕಟ್ರಮಣ ಹೊಳ್ಳ ಅವರ ಮೃತದೇಹ ಘಟನೆಯ ತುಸು ದೂರ ಬಿದ್ದಿದ್ದು ಅವರ ತಲೆ ಜಜ್ಜಿ ಹೋಗಿದೆ. ವೆಂಕಟ್ರಮಣ ಹೊಳ್ಳ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಬೇರೆ ಯಾವುದೋ ವಾಹನ ಡಿಕ್ಕಿಯಾಗಿ ಹೋಗಿರಬಹುದೇ ಎಂಬ ಶಂಕೆಯು ವ್ಯಕ್ತವಾಗುತ್ತಿದೆ. ಪುತ್ತೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಸಹಿತ ಹಲವರಿಗೆ ಆರೆಸ್ಸೆಸ್ ಮಾರ್ಗದರ್ಶಕರಾಗಿದ್ದ ಇವರು ಬ್ರಹ್ಮಚಾರಿಯಾಗಿ ಸಂಘದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಜಾತಿ ತಾರತಮ್ಯ ಹೋಗಲಾಡಿಸಲು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಇವರ ಜೀವನಚರಿತ್ರೆಯನ್ನು ಉತ್ತರ ಭಾರತದ ಶಾಖೆಗಳಲ್ಲಿ ಸ್ವತಃ ಸರಸಂಘಚಾಲಕ ಡಾ.ಮೋಹನ್ ಭಗವತ್ ಅವರೇ ಸ್ವಯಂಸೇವಕರಿಗೆ ತಿಳಿಸುವಷ್ಟು ಮಾದರಿ ವ್ಯಕ್ತಿಯಾಗಿ ವೆಂಕಟರಮಣ ಹೊಳ್ಳ ಸಂಘದೊಳಗೆ ಗುರುತಿಸಿಕೊಂಡಿದ್ದರು ಎಂದು ಹಿರಿಯ ಸ್ವಯಂಸೇವಕರೊಬ್ಬರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!