Sunday, May 19, 2024
Homeಕರಾವಳಿಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ

ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ

spot_img
- Advertisement -
- Advertisement -

ಕಡಬ: ಕೆಲಸಕ್ಕೆಂದು ತೆರಳಿದ ಯುವಕನೋರ್ವ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಬಲ್ಯದಿಂದ ವರದಿಯಾಗಿದೆ.

ಬಲ್ಯ ಗ್ರಾಮದ ದೇರಾಜೆ ಎಂಬಲ್ಲಿರುವ ಫರ್ನಿಚರ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ದೇರಾಜೆ ನಿವಾಸಿ ಚಂದ್ರಶೇಖರ್(23) ಎಂಬಾತ ಸೆಪ್ಟೆಂಬರ್ 04 ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.

ಮೊಬೈಲನ್ನು ಮನೆಯಲ್ಲೇ ಬಿಟ್ಟು ಬೈಕಿನಲ್ಲಿ ತೆರಳಿದ್ದು, ನನ್ನನ್ನು ಹುಡುಕಬೇಡಿ ಹುಡುಕಿದರೆ ಜೀವಂತವಾಗಿ ಇರುವುದಿಲ್ಲ ಎಂದು ಮೊಬೈಲ್‌ ಕೆಳಗಡೆ ಚೀಟಿ ಬರೆದಿಟ್ಟು ನಾಪತ್ತೆಯಾಗಿರುವುದಾಗಿ ಆತನ ತಂದೆ ಧರ್ಣಪ್ಪ ಪೂಜಾರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!