Saturday, June 28, 2025
Homeಕರಾವಳಿಕಡಬ: ಕೋವಿಡ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ಬಂಧನ

ಕಡಬ: ಕೋವಿಡ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ಬಂಧನ

spot_img
- Advertisement -
- Advertisement -

ಕಡಬ: ತಾಲೂಕಿನ ಸವಣೂರು ಗ್ರಾಮದ ಪಣೆಮಜಲು ಎಂಬಲ್ಲಿ ಕೋವಿಡ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಯುವಕನೋರ್ವನ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ಇಂದು ನಡೆದಿದೆ.

ಇಲ್ಲಿಯ ಮೇಘರಾಜ ಬಂಧಿತ ಯುವಕ. ಪಣೆಮಜಲು ಎಂಬಲ್ಲಿ ಕೋವಿಡ್ – 19 ಕರ್ತವ್ಯದಲ್ಲಿದ್ದ ಆರೋಗ್ಯ ಇಲಾಖೆಯವರು ,ಪಂಚಾಯತ್ ಪಿಡಿಒ, ಆಶಾಕಾರ್ಯಕರ್ತೆರು, ಗ್ರಾಮ ಪಂಚಾಯತ್ ಸದಸ್ಯರಿಗೆ ಮೇಘರಾಜ ಬೈದು ,ಇಲ್ಲಿಯ ಜನರನ್ನು ಯಾಕೆ ಕ್ವಾರಂಟೈನ್ ಮಾಡುತ್ತೀರಿ. ನೀವು ಇಲ್ಲಿ ಬಂದು ರೋಗ ತಡೆಗಟ್ಟುವ ಅಗತ್ಯವಿಲ್ಲ ಎಂದು ಹೇಳಿರುವುದಾಗಿ ಆರೋಪಿಸಲಾಗಿದೆ.

ಈ ವಿಚಾರವಾಗಿ ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸವಣೂರು ಉಪಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ವಾಗೇಶ್ವರಿ ಅವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!