- Advertisement -
- Advertisement -
ಕಡಬ: ಮೇಯಲು ಬಿಟ್ಟಿದ್ದ ದನಗಳ ಮೇಲೆ ಚಿರತೆ ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ನಡೆದಿದೆ.
ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಾಜೆ ಅಂತಿಬೆಟ್ಟು ಪ್ರದೇಶದಲ್ಲಿ ಲಕ್ಷ್ಮಣ ಗೌಡ ಎಂಬರಿಗೆ ಸೇರಿದ ದನ ಮತ್ತು ಕರುವಿನ ಮೇಲೆ ದಾಳಿ ಮಾಡಿದ್ದು ಎರಡು ದನಗಳೂ ಗಂಭೀರ ಗಾಯಗೊಂಡಿದೆ. ಕಳೆದ ಎರಡು ತಿಂಗಳಿನಿಂದ ಸುಮಾರು 20 ಕ್ಕೂ ಹೆಚ್ಚು ದನಗಳ ಮೇಲೆ ದಾಳಿ ಮಾಡಿರುವುದಾಗಿ ಗ್ರಾಮದ ನಿವಾಸಿಗಳು ಮಾಹಿತಿ ನೀಡಿದ್ದಾರೆ.
- Advertisement -