- Advertisement -
- Advertisement -
ಬೆಳ್ತಂಗಡಿ; ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟಿನಲ್ಲಿ ನಾಳೆಯಿಂದ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ. ಫೆಬ್ರವರಿ 5 ಭಾನುವಾರದವರಗೆ ಜಾತ್ರಾ ಕಾರ್ಯಕ್ರಮ ನಡೆಯಲಿದೆ.
ಆ ಪ್ರಯುಕ್ತ ಭಕ್ತರೆಲ್ಲ ರೂ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ದೇವಿಯ ದರ್ಶನಗೈದು, ಪ್ರಸಾದವನ್ನು ಸ್ವೀಕರಿಸಿ, ಶ್ರೀ ದುರ್ಗಾಕಾಳಿಕಾಂಬ ದೇವಿಯ ದಿವ್ಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.
ಜಾತ್ರೆಯ ಹಿನ್ನೆಲೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ದಿ 03/02/2023, ಶುಕ್ರವಾರ ದಂದು ಬೆಳಗ್ಗೆ 09:00 ಗಂ.ಯಿಂದ ಹಸಿರುವಾಣಿ ಹೊರೆಕಾಣಿಕೆ ಯನ್ನು ಸ್ವೀಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- Advertisement -