- Advertisement -
- Advertisement -
ಚಿಕ್ಕಬಳ್ಳಾಪುರ: ಕುಟುಂಬ ನಿಯಂತ್ರಣ ಯೋಜನೆಗಳನ್ನು ಹಿಂದೂಗಳು ಮಾತ್ರ ನಿರ್ವಹಿಸುತ್ತಿದ್ದಾರೆ ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್, ಮುಸ್ಲಿಮರಿಂದ ದೇಶದಲ್ಲಿ ಭಯೋತ್ಪಾಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ಕೆಲವರು ಹಿಂದೂ ಸಂಘಟನೆಗಳ ವಿರುದ್ದ ಕೋಮುವಾದಿಯೆಂದು ಆರೋಪ ಮಾಡುತ್ತಿದ್ದಾರೆ ಎಂ ಹೇಳಿರುವ ಪ್ರಭಾಕರ ಭಟ್,
ಪ್ರಪಂಚದಲ್ಲಿ ಎಲ್ಲಾ ಧರ್ಮಗಳ ಜೊತೆ ಸಹಬಾಳ್ವೆ ಮಾಡುವವರು ಹಿಂದೂಗಳು ಎಂದು ತಿಳಿಸಿದ್ದಾರೆ.
- Advertisement -